Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಪಿಎಂ ಆವಾಜ್ ಯೋಜನೆಯಲ್ಲಿ ಚಿತ್ರದುರ್ಗ ತುಮಕೂರು ಜಿಲ್ಲೆಗಳ ವಸತಿ ಮಂಜೂರಾತಿ ಮಾಹಿತಿ ಪಡೆದ ಸಂಸದ ಗೋವಿಂದ ಕಾರಜೋಳ
ದೇಶ

ಪಿಎಂ ಆವಾಜ್ ಯೋಜನೆಯಲ್ಲಿ ಚಿತ್ರದುರ್ಗ ತುಮಕೂರು ಜಿಲ್ಲೆಗಳ ವಸತಿ ಮಂಜೂರಾತಿ ಮಾಹಿತಿ ಪಡೆದ ಸಂಸದ ಗೋವಿಂದ ಕಾರಜೋಳ

D KumaraswamyBy D KumaraswamyAugust 5, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಪ್ರಧಾನಮಂತ್ರಿ ಆವಾಸ್ ಯೋಜನೆ ವಸತಿ ಅನುದಾನ ಸಮರ್ಪಕ ಬಳಕೆಯಾಗಲಿ : ಸಂಸದ ಗೋವಿಂದ
ಕಾರಜೋಳ

ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ವಸತಿ ಯೋಜನೆಯಡಿ ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ವಸತಿ ರಹಿತರಿಗೆ ವಸತಿಯನ್ನು ಒದಗಿಸುವ ದೃಷ್ಟಿಯಿಂದ ಸರ್ವೆ ಕಾರ್ಯವನ್ನು ಏನಾದರು ನಡೆಸಲಾಗಿದೆಯೇ ? ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಎಷ್ಟು ಮನೆಗಳು ಮಂಜೂರಾಗಿವೆ ? ಎಷ್ಟು ಮನೆಗಳು ಮಂಜೂರಾಗಲು ಬಾಕಿಯಿವೆ, ಮತ್ತು ಎಷ್ಟು ಮನೆಗಳು ಪೆಂಡಿಂಗ್ ಇವೆ ? ಅದೇ ರೀತಿ ಎಷ್ಟು ಅನುದಾನ ಮಂಜೂರಾಗಿದೆ, ವಸತಿ ರಹಿತರಿಗೆ ವಸತಿ ಒದಗಿಸಲು ಈ ಯೋಜನೆಯ ಜೊತೆಗೆ ರಾಜ್ಯ ಸರ್ಕಾರಗಳು ಯಾವ ಕ್ರಮ ಕೈಗೊಂಡಿವೆ ಎಂದು ಸಂಸತ್ತಿನಲ್ಲಿ ಸಂಸದ ಗೋವಿಂದ ಕಾರಜೋಳ ಗ್ರಾಮೀಣಾಭಿವೃದ್ದಿ ಖಾತೆ ರಾಜ್ಯ ಸಚಿವ ಡಾ: ಚಂದ್ರಶೇಖರ ಪೆಮ್ಮಸಾನಿ ಅವರಿಗೆ ಮಾಹಿತಿ ಕೇಳಿದ್ದಾರೆ.
ಸಂಸದರ ಪ್ರಶ್ನೆಗೆ ಉತ್ತರ ನೀಡಿದ ಕೇಂದ್ರ ವಸತಿ ಸಚಿವರು, ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಯೋಜನೆಯಡಿ ವಸತಿರಹಿತರನ್ನು ಗುರುತಿಸುವ ಕಾರ್ಯ 2011 ರಲ್ಲಿ ನಡೆದ ಸಾಮಾಜಿಕ ಆರ್ಥಿಕ ಜಾತಿ ಗಣತಿಯಲ್ಲಿ ಸೂಚಿಸಲಾದ ಮಾನದಂಡಗಳ ಮೇಲೆ ನಡೆಯುತ್ತದೆ. ಈ ರೀತಿ ಗುರುತಿಸುವ ವಸತಿ ರಹಿತರನ್ನು ಗ್ರಾಮಸಭೆಗಳ ಮೂಲಕ ಅಂತಿಮಗೊಳಿಸಲಾಗುತ್ತದೆ. ಸರ್ಕಾರ 2018 ರ ಜನವರಿಯಿಂದ 2019 ರ ಮಾರ್ಚ್ ವರೆಗೆ ಆವಾಸ್ ಯೋಜನೆಯ ಸರ್ವೆ ಕಾರ್ಯ ನಡೆಸಲಾಗಿದೆ. ಈ ಸರ್ವೆ ಕಾರ್ಯದಲ್ಲಿ ಬಿಟ್ಟು ಹೋದವರನ್ನು ಪುನ: ಹೆಚ್ಚುವರಿ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಒಟ್ಟು 3.90 ಕೋಟಿ ಅರ್ಹ ಕುಟುಂಬಗಳು ಈ ಸರ್ವೆಯಲ್ಲಿ ನೊಂದಾಯಿಸಿಕೊಂಡಿವೆ. ಗ್ರಾಮಸಭೆಗಳಲ್ಲಿ ಈ ನೊಂದಣಿ ಯನ್ನು ಪರಿಶೀಲನೆ ನಡೆಸಿದ ,ನಂತರ ಈ ಸಂಖ್ಯೆ 2.95 ಕೋಟಿ ಕುಟುಂಬಗಳು ವಸತಿಗಾಗಿ ಅರ್ಹತೆ ಹೊಂದಿವೆ ಎಂಬುದನ್ನು ಅಂತಿಮಗೊಳಿಸಲಾಗಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 2.95 ಕೋಟಿ ಮನೆಗಳ ಒಟ್ಟಾರೆ ಕಡ್ಡಾಯ ಗುರಿಯನ್ನು ಈಗಾಗಲೇ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಇದಕ್ಕೆ ಪೂರಕವಾಗಿ 2.94 ಕೋಟಿಗೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಗಿದೆ, 2.64 ಕೋಟಿ ಮನೆಗಳನ್ನ ಈಗಾಗಲೇ ನಿರ್ಮಾಣ ಮಾಡಲಾಗಿದೆ.

 

 

ಒಟ್ಟಾರೆಯಾಗಿ 2011 ರ ಸಾಮಾಜಿಕ ಆರ್ಥಿಕ ಜಾತಿ ಗಣತಿಯಲ್ಲಿ ಹಾಗೂ 2018 ರ ವಸತಿ ಸಮೀಕ್ಷೆಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 56,605 ಮತ್ತು ತುಮಕೂರು ಜಿಲ್ಲೆಯಲ್ಲಿ 77,871 ಅರ್ಹ ಕುಟುಂಬಗಳು ವಸತಿಗಾಗಿ ಬೇಡಿಕೆ ಪಟ್ಟಿಯಲ್ಲಿದ್ದಾರೆ. ಇದಕ್ಕೆ ಪೂರಕವಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ)ಯಡಿ 2016-17 ರಿಂದ 2023-24 ರವರೆಗೆ ಚಿತ್ರದುರ್ಗ ಜಿಲ್ಲೆಗೆ ಸುಮಾರು 1895 ಮನೆಗಳು ಹಾಗೂ ತುಮಕೂರು ಜಿಲ್ಲೆಗೆ ಸುಮಾರು 1548 ಮನೆಗಳು ಮಂಜೂರಾಗಿವೆ. ಹೀಗಿದ್ದೂ ಕೂಡ ಮಂಜೂರಾಗಿರುವ ಮನೆಗಳಲ್ಲಿ ಶೇಕಡ 30 ರಷ್ಟು ಮನೆಗಳ ನಿರ್ಮಾಣ ಕಾರ್ಯ ಇನ್ನೂ ಮುಗಿದಿಲ್ಲ ಎಂದು ಸಚಿವರು ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ.

 

 

 

Share. Facebook Twitter Pinterest LinkedIn Tumblr WhatsApp Email
Previous Articleಸಿದ್ದರಾಮಯ್ಯ ಬೆಂಬಲಿಸಿ ವಿವಿಧ ಒಕ್ಕೂಟಗಳಿಂದ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ
Next Article ಅದ್ದೂರಿಯಾಗಿ ನಡೆದ ಸಿದ್ದರಾಮೇಶ್ವರರ 62 ನೇ ರಥೋತ್ಸವ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.