Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಸಿಎಸ್ ಆರ್ ಬಳಕೆ ಬಗ್ಗೆ ಪ್ರಶ್ನಿಸಿದ ಸಂಸದ ಕಾರ ಜೋಳ: ಚಿತ್ರದುರ್ಗ ಜಿಲ್ಲೆಗೆ 48.33 ಕೋಟಿ‌ಹಣ ಬಳಕೆ
ದೇಶ

ಸಿಎಸ್ ಆರ್ ಬಳಕೆ ಬಗ್ಗೆ ಪ್ರಶ್ನಿಸಿದ ಸಂಸದ ಕಾರ ಜೋಳ: ಚಿತ್ರದುರ್ಗ ಜಿಲ್ಲೆಗೆ 48.33 ಕೋಟಿ‌ಹಣ ಬಳಕೆ

D KumaraswamyBy D KumaraswamyJuly 30, 2024Updated:July 30, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ರಾಜ್ಯದಲ್ಲಿ ಕಾರ್ಪೋರೇಟ್ ವಲಯದ ಸಾಮಾಜಿಕ ಹೊಣೆಗಾರಿಕೆ ಅನುದಾನದ ಬಳಕೆ ಕುರಿತು ಸಂಸತ್ತಿನಲ್ಲಿ ಗೋವಿಂದ ಕಾರಜೋಳ ಪ್ರಶ್ನೆ ಕೇಳಿದ್ದು, ಕಳೆದ ೫ ವರ್ಷಗಳಲ್ಲಿ ಕರ್ನಾಟಕಕ್ಕೆ ಕಾರ್ಪೋರೇಟ್ ವಲಯದ ಸಾಮಾಜಿಕ ಹೊಣೆಗಾರಿಕೆ ಅನುದಾನವನ್ನು (csr) ಯಾವ ಪ್ರಮಾಣದಲ್ಲಿ ಹಂಚಿಕೆ ಮಾಡಲಾಗಿದೆ, ಜಿಲ್ಲಾವಾರು ಎಷ್ಟು ಅನುದಾನ ಬಂದಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಪ್ರಾಭಲ್ಯವಿರುವ ಪ್ರದೇಶಗಳಿಗೆ ಹೆಚ್ಚಿನ ಸಿ.ಎಸ್.ಆರ್. ಅನುದಾನ ಬಳಸಲು ಕೇಂದ್ರ ಸರ್ಕಾರ ಏನಾದರು ವಿಶೇಷ ಆಸಕ್ತಿ ತಗೆದುಕೊಂಡಿದೆಯೇ ಎಂಬುದರ ಕುರಿತು ಸಂಸದ ಗೋವಿಂದ ಕಾರಜೋಳರವರು ಸಂಸತ್ತಿನಲ್ಲಿ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯವನ್ನು ಕುರಿತು ಪ್ರಶ್ನಿಸಿದ್ದಾರೆ.
ಸಂಸದರ ಪ್ರಶ್ನೆಗೆ ಉತ್ತರಿಸಿರುವ ಕಾರ್ಪೋರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ ಮಲ್ಹೋತ್ರ ಕಂಪನಿಗಳ ಕಾಯ್ದೆ2013 ಅಡಿಯಲ್ಲಿ ಪ್ರತಿಯೊಂದು ಕಂಪನಿಗಳು ವಾರ್ಷಿಕವಾಗಿ ಸಿ.ಎಸ್.ಆರ್.ಚಟುವಟಿಕೆಗಳ ವಿವರಗಳನ್ನು ಬಹಿರಂಗಪಡಿಸುವುದು ಅವಶ್ಯವಾಗಿರುತ್ತದೆ. ಕಂಪನಿಗಳು ಸಲ್ಲಿಸುವ ಸಿ.ಎಸ್.ಆರ್. ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕ ಡೊಮೈನ್‌ನಲ್ಲಿ ವೀಕ್ಷಣೆ ಮಾಡಬಹುದಾಗಿ ಎಂದು ತಿಳಿಸಿದ್ದಾರೆ.
2018-19 ನೇ ಸಾಲಿನಿಂದ 2023-24 ನೇ ಸಾಲಿನವರೆಗೆ ಕರ್ನಾಟಕಕ್ಕೆ ಸುಮಾರು 7800 ಕೋಟಿಯಷ್ಟು ಸಿ.ಎಸ್.ಆರ್ ಅನುದಾನವನ್ನು ನೀಡಲಾಗಿದೆ. ಅದರಲ್ಲಿಯೂ ಚಿತ್ರದುರ್ಗ ಜಿಲ್ಲೆಗೆ ಕಳೆದ ೫ ವರ್ಷಗಳಲ್ಲಿ ಸುಮಾರು 48.33 ಕೋಟಿಯಷ್ಟು ಸಿ.ಎಸ್.ಆರ್. ಅನುದಾನವನ್ನು ಬಳಸಲಾಗಿದೆ. ಕಂಪನಿಗಳು ಹಾಗು ಅವುಗಳ ಮಂಡಳಿಗಳು ಅದರ ಸಿ.ಎಸ್.ಆರ್. ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಚಟುವಟಿಕೆಗಳನ್ನು ನಿರ್ಧರಿಸಲು, ಕಾರ್ಯಗೊತಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ಅಧಿಕಾರವನ್ನು ಹೊಂದಿರುತ್ತವೆ. ನಿರ್ಧಿಷ್ಟ ಪ್ರದೇಶ ಅಥವಾ ಚಟುವಟಿಕೆಯಲ್ಲಿ ಖರ್ಚು ಮಾಡಲು ಕಂಪನಿಗಳಿಗೆ ಸರ್ಕಾರ ಯಾವುದೇ ನಿರ್ದೇಶನಗಳನ್ನು ನೀಡುವುದಿಲ್ಲ. ಕಾಯಿದೆಯ ವೇಳಾಪಟ್ಟಿ ೭ ರನ್ವಯ ಕಂಪನಿಗಳು ಸಿ.ಎಸ್.ಆರ್. ಅಡಿ ಕೈಗೊಳ್ಳಬಹುದಾದ ಅರ್ಹ ಚಟುವಟಿಕೆಗಳನ್ನು ಮತ್ತು ಸುಸ್ಥಿರ ಅಭಿವೃದ್ದಿಯನ್ನು ಉತ್ತೇಜಿಸಲು ರಾಷ್ಟ್ರೀಯ ಆದ್ಯತೆಗಳೊಂದಿಗೆ ಜೋಡಿಸಲ್ಪಟ್ಟಿರುತ್ತದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳ ಅಭಿವೃದ್ದಿ, ಕೊಳಚೆ ಪ್ರದೇಶಗಳ ಅಭಿವೃಧ್ದಿ, ಗ್ರಾಮೀಣ ಅಭಿವೃದ್ದಿ ಯೋಜನೆಗಳು, ಅಸಮಾನತೆಗಳನ್ನು ಕಡಿಮೆ ಮಾಡುವ ಕ್ರಮಗಳ ಕುರಿತು ಹೆಚ್ಚಿನ ಗಮನ ನೀಡುವ ಕುರಿತು ಕಂಪನಿಗಳ ಗಮನ ಸೆಳೆಯಲಾಗುವುದು ಎಂದಿದ್ದಾರೆ.

 

 

 

 

Share. Facebook Twitter Pinterest LinkedIn Tumblr WhatsApp Email
Previous Articleಮಾತು ಕೊಟ್ಟಂತೆ 5300 ಕೋಟಿ ಅನುದಾನ ಬಿಡುಗಡೆಗೆ ಸಚಿವ ಡಿ.ಸುಧಾಕಾರ್ ಒತ್ತಾಯ
Next Article ಕೇರಳದ ವಯನಾಡಿನ ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.