Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಕನಸು ನನ್ನದಾಗಿದೆ
ಜಿಲ್ಲಾ ಸುದ್ದಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಕನಸು ನನ್ನದಾಗಿದೆ

D KumaraswamyBy D KumaraswamyDecember 10, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಲು ಟಿಕೆಟ್ ನೀಡಿದರೆ ಮತದಾರರು ನನ್ನ ಕೈ ಹಿಡಿದರೆ ಈ ಭಾಗದ ಜನತೆ ಆರೋಗ್ಯ, ಶಿಕ್ಷಣ, ಕೃಷಿ, ಕಾರ್ಮಿಕರಿಗೆ ಮತ್ತು ರೈತರಿಗೆ ನೆರವಾಗುವಂತ ಕಾರ್ಯಕ್ರಮಗಳನ್ನು ಹಾಕಿ ಕೊಳ್ಳಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಪಕ್ಷ ಟಿಕೆಟ್ ಆಕಾಂಕ್ಷಿ ಕುಮಾರಸ್ವಾಮಿ ತಿಳಿಸಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಬಿಎಸ್‍ಸಿ ಅಗ್ರಿಕಲ್ಚರ್ ವಿದ್ಯಾಭ್ಯಾಸವನ್ನು ಮಾಡಿದ್ದು, ರೈತಾಪಿ ಕುಟುಂಬದವನಾಗಿದ್ದೇನೆ ನನ್ನ ತಂದೆಯಾದ ವೆಂಕಟರಮಣಪ್ಪ ದೆಸೆಯಿಂದ ಕಳೆದ 30ವರ್ಷದಿಂದ ರಾಜಕೀಯದಲ್ಲಿದ್ದೇನೆ, ಕಾಂಗ್ರೆಸ್‍ನಲ್ಲಿ ವಿವಿಧ ರೀತಿಯ ಹುದ್ದೆಗಳನ್ನು ಅಲಂಕರಿಸಿ ಕೆಲಸವನ್ನು ಮಾಡಿದ್ದೇನೆ. ನನಗೆ ಬಡವರ, ಕಾರ್ಮಿಕರ ಕಷ್ಟ ಏನೆಂದು ಗೊತ್ತಿದೆ ಅದರ ಬಗ್ಗೆಯೂ ಚಿಂತನೆಯು ಸಹಾ ಇದೆ. ಇಲ್ಲಿ ಲೋಕಸಭಾ ಸದಸ್ಯರಾದವರು ಲೋಕಸಭೆಯಲ್ಲಿ ಕ್ಷೇತ್ರದ ಪ್ರಗತಿಯ ಬಗ್ಗೆ ಯಾವ ಮಾತನ್ನು ಸಹಾ ಆಡುವುದಿಲ್ಲ ಅಲ್ಲದೆ ಕ್ಷೇತ್ರದಲ್ಲಿ ಪ್ರಗತಿಯನ್ನು  ಮಾಡುವುದಿಲ್ಲ, ಚಿತ್ರದುರ್ಗ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಜಾಗವಾಗಿದ ಅದರ ಬಗ್ಗೆ ಯಾವ ಸಂಸದ ಸದಸ್ಯರು ಸಹಾ ಗಮನ ನೀಡಿಲ್ಲ, ಅಲ್ಲದೆ ಪಾವಗಡದಲ್ಲಿ ಸೋಲಾರ್ ಪಾರ್ಕನ್ನು ಹಾಕುವುದರ ಮೂಲಕ ವಿದ್ಯುತ್ ಉತ್ಪಾದನೆಯನ್ನು ಮಾಡಲಾಗುತ್ತಿದೆ ಇದರ ಬಗ್ಗೆಯೂ ಸಹಾ ಯಾರು ಗಮನ ನೀಡುತ್ತಿಲ್ಲ ಎಂದು ವಿಷಾಧಿಸಿದರು.
ಕಳೆದ ಎರಡು ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೆ ಆದರೆ ಟಿಕೆಟ್ ಕೈ ತಪ್ಪಿತು, ಈ ಬಾರಿ ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಅಲ್ಲದೆ ಇಲ್ಲಿ ನನ್ನ ಭೋವಿ ಸಮುದಾಯವರು 2 ಲಕ್ಷ ಜನರಿದ್ದಾರೆ. ಮಠ ಇದೆ ಶ್ರೀಗಳ ಆರ್ಶೀವಾದ ನನ್ನ ಮೇಲಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಾಮಾಜಿಕ ನ್ಯಾಯದ ಮೇಲೆ ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಭೋವಿ ಸಮುದಾಯಕ್ಕೆ ಟಿಕೆಟ್ ನೀಡುತ್ತಾರೆ ಎಂಬ ನಂಬಿಕೆ ಇದೆ. ಈ ಹಿನ್ನಲೆಯಲ್ಲಿ ಕ್ಷೇತ್ರವನ್ನು ಪ್ರವಾಸ ಮಾಡುವುದರ ಮೂಲಕ ಮತದಾರರನ್ನು ಭೇಟಿ ಅವರ ಕಷ್ಟಗಳನ್ನು ಆಲಿಸಲಾಗುತ್ತಿದೆ. ಈ ಬಾರಿ ನನಗೆ ಟಿಕೆಟ್‍ನ್ನು ನೀಡುವಂತೆ ಪಕ್ಷದ ಹೈಕಮಾಂಡ್‍ಗೆ ಮನವಿಯನ್ನು ಮಾಡಲಾಗಿದೆ. ಅವರು ಸಹಾ ಕ್ಷೇತ್ರದಲ್ಲಿ ಪ್ರವಾಸವನ್ನು ಮಾಡುವಂತೆ ಸೂಚಿಸಿದ್ದಾರೆ ಎಂದರು.
ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ನನಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವು ಇದೆ ಬರದ ನಾಡದ ಚಿತ್ರದುರ್ಗ ಮುಂದಿನ ದಿನಮಾನದಲ್ಲಿ ಮಲೆನಾಡಾಗಿ ಮಾರ್ಪಾಡಾಗಬೇಕಿದೆ. ಇದಕ್ಕಾಗಿ 1 ಕೋಟಿ ಸಸಿಗಳನ್ನು ನೆಡುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು, ಇದ್ದಲ್ಲದೆ ಪಂಚಾಯಿತಿಗೆ ಒಂದರಂತೆ ಹೈಟೆಕ್ ಶಾಲೆಯನ್ನು ನಿರ್ಮಾಣ ಮಾಡುವುದರ ಮೂಲಕ ಎಲ್ಲಾ ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು, ಇದರೊಂದಿಗೆ ತಾಲ್ಲೂಕಿಗೆ ಒಂದರಂತೆ ಹೈಟೆಕ್ ಆಸ್ಪತ್ರೆಯನ್ನು ಸಹಾ ನಿರ್ಮಾಣ ಮಾಡುವ ಯೋಚನೆ ಇದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಕನಸು ನನ್ನದಾಗಿದೆ ಇದಕ್ಕೆ ಪಕ್ಷದ ಹೈಕಮಾಂಡ್ ಮತ್ತು ಮತದಾರರ ಒಲವು ಅಗತ್ಯವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಗೋಷ್ಟಿಯಲ್ಲಿ ಧನಂಜಯ, ಮಂಜುನಾಥ್, ಸೋಮಶೇಖರ ರೆಡ್ಡಿ, ಮೇಘರಾಜ್, ಬಾಲಕೃಷ್ಣ, ಬಾಬು ಸೇರಿದಂತೆ ಇತರರು ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಮದುವೆಗೆಂದು ಹೊರಟ ಬಸ್ ಪಲ್ಟಿ ಓರ್ವ ಸಾವು 60 ಜನರಿಗೆ ಗಾಯ
Next Article ಪಕ್ಷದ ಒಳಜಗಳ ಮತ್ತು ಕೇಂದ್ರ ಸರ್ಕಾರ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕ ಅಡ್ಡಿ: ಸಿಎಂ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.