ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯಾಗಿ ಓ ಪರಮೇಶ್ವರಪ್ಪ ನೇಮಕ

ಜಿಲ್ಲಾ ಸುದ್ದಿ

ಚಿತ್ರದುರ್ಗದ ಪರಿಶಿಷ್ಟ ವರ್ಗಗಗಳ ಕಲ್ಯಾಣಾಧಿಕಾರಿಯಾಗಿ ಓ.‌ಪರಮೇಶ್ವರಪ್ಪ ಅವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಪರಮೇಶ್ವರಪ್ಪ ಅವರು ಈ ಹಿಂದೆ ಚಿತ್ರದುರ್ಗದ ಸಮಾಜ‌ಕಲ್ಯಾಣ ಇಲಾಖೆಯ ಸಹಾಯಕ‌ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಸಮಾಜ‌ ಕಲ್ಯಾಣ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ವ್ಯಾಸಾಂಗಕ್ಕೆ ಅನುಕೂಲವಾಗುವಂತಹ ಸ್ಮಾರ್ಟ್ ಕ್ಲಾಸ್ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ತರಗತಿಗಳನ್ನು ನಡೆಸಿ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶ ಬರಲು ಕಾರಣರಾಗಿದ್ದರು. ಸ್ವಚ್ಚತೆಯ ಬಗ್ಗೆ ಸ್ವತಃ ತಾವೇ ನಿಂತು ಸ್ವಚ್ಚತೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದರು.ಇಂತಹ ವ್ಯಕ್ತಿ ಇಂದು‌ ಪರಿಶಿಷ್ಟ. ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿ ಬಂದಿದ್ದು, ಪರಿಶಿಷ್ಟ ವರ್ಗದ ಸಮಾಜಕ್ಕೆ ಮತ್ತಷ್ಟು ಉಪಯುಕ್ತ ಕೆಲಸಗಳಾಗುವುದರಲ್ಲಿ ಅನುಮಾನವಿಲ್ಲ.

 

 

 

Leave a Reply

Your email address will not be published. Required fields are marked *