Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ದಿನವೊಂದಕ್ಕೆ 1ಕೋಟಿ ಲೀ.ಹಾಲು ಉತ್ಪಾದನೆ  ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ದಿನವೊಂದಕ್ಕೆ 1ಕೋಟಿ ಲೀ.ಹಾಲು ಉತ್ಪಾದನೆ  ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ

D KumaraswamyBy D KumaraswamyJuly 2, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ದಿನವೊಂದಕ್ಕೆ 1ಕೋಟಿ ಲೀ.ಹಾಲು ಉತ್ಪಾದನೆ  ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು (ಸಂ ವಾ): ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಅವರು ಇಂದು KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ.ಇತ್ತು ಎಂದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ
ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

 

 

ರೈತರಿಗೆ ನೆರವು
ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2.00 ರೂಪಾಯಿ ಹೆಚ್ಚಿಸಲಾಗಿದೆ ಎಂದರು.

ವಿಪಕ್ಷದ ಅಪಪ್ರಚಾರ

ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.

2.00 ರೂ.ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆ ಎಂದರು.

ಹಾಲಿನ ದರ ಹೆಚ್ಚಳವಾಗಿಲ್ಲ
ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿಗಳು .
ಗ್ರಾಹಕರಿಗೆ ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ಕರ್ನಾಟಕ ಮಾತ್ರ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleಮಕ್ಕಳ ಭವಿಷ್ಯ ಕಟ್ಟುವ ಕೆಲಸ ಶಿಕ್ಷಣ ಸಂಸ್ಥೆಗಳಿಂದ ಮಾತ್ರ ಸಾಧ್ಯ: ಶಿವ ಶರಣ ಮಾದಾರಚನ್ನಯ್ಯ ಶ್ರೀ
Next Article ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ ಸಿಎಂ ಸ್ಪಷ್ಟನೆ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.