ಚಿತ್ರದುರ್ಗದ ಜೆಸಿಆರ್ ಬಡಾವಣೆಯ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸಿಡಿದು ಒಂದೇ ಕುಟುಂಬದ ಆರು ಜನರಿಗೆ ಸುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ಇಂದು ಮನೆಯಲ್ಲಿ ಅಡುಗೆ ಮಾಡಲು ಸ್ಟವ್ ಹಚ್ಚಲು ಹೋದಾಗ ಸಿಲಿಂಡರ್ ಸಿಡಿದಿದೆ.ಇದರ ಪರಿಣಾಮ ಆರು ಜನರು ಗಾಯಗೊಂಡಿದ್ದು, ಅವರನ್ನು ಅಸ್ಮತ್, ಆಫ್ರಿನ್, ಚಾಂದಿನಿ, ತಮನ್ನಾ, ಶಫಿ ಮತ್ತು ಅರ್ಮಾನ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಸುತ್ತಮುತ್ತಲಿನ ಜನರು ಕೂಡಲೇ ದಾಖಲಿಸಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದರೆ ತೀವ್ರ ಸುಟ್ಟ ಗಾಯಗಳಾಗಿರುವ ಅರ್ಮಾನ್ ಎಂಬ ಮಗುವನ್ನ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ