ಅತ್ಯಾಚಾರಿಗೆ 10 ವರ್ಷ ಕಠಿಣ ಸಜೆ ನೀಡಿದ ನ್ಯಾಯಾಲಯ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲ. ಯದ ನ್ಯಾಯಾಧೀಶರಾದ ಕೋಮಲ ಅವರು 10 ವರ್ಷಗಳ ಕಠಿಣ ಸಜೆ 25 ಸಾವಿರ ದಂಡ ಹಾಗು ಸಂತ್ರಸ್ತ ಬಾಲಕಿಗೆ 4 ಲಕ್ಷ ಪರಿಹಾರವನ್ನು ಆದೇಶಿಸಿ ತೀರ್ಪು ನೀಡಿದ್ದಾರೆ.
ಆರೋಪಿ ಅರುಣ್ ಕುಮಾರ್ ಅವರು 24-04-21 ರಂದು ಸಂತ್ರಸ್ತೆಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳ್ಳಾರಿ ಮತ್ತು ಮುರುಡೇಶ್ವರಕ್ಕೆ ಕರೆದುಕೊಂಡು ಹೋಗಿ ಲಾಡ್ಜೊಂದರಲ್ಲಿ ಅತ್ಯಾಚಾರ ಮಾಡಿದ್ದನು. ಇದರ ಬಗ್ಗೆ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಇನ್ಸ್ ಪೆಕ್ಟರ್ ಶ್ರೀಧರ ಶಾಸ್ತ್ರಿ ಅವರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಎರಡನೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯದ ನ್ಯಾಯಾಧೀಶರಾದ ಕೋಮಲ ಅವರು ಆರೋಪಿ ಅರುಣ್ ಕುಮಾರ್ ಗೆ ಐಪಿಸಿ 376 ರ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು 25 ಸಾವಿರ ದಂಡ ಹಾಗೂ ಸಂತ್ರಸ್ತೆಗೆ 4 ಲಕ್ಷ ಪರಿಹಾರ ನೀಡುವಂತೆವ ಆದೇಶಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹೆಚ್ ಆರ್ ಜಗದೀಶ್ ವಾದ ಮಂಡಿಸಿದ್ದರು.