ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ತತ್ತರ ; ಬಿ.ಎನ್.ಚಂದ್ರಪ್ಪ

ರಾಜ್ಯ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ತತ್ತರ ; ಬಿ.ಎನ್.ಚಂದ್ರಪ್ಪ

 

ದೇಶದೆಲ್ಲೆಡೆ ಅಗತ್ಯ ವಸ್ತುಗಳ ಬೆಲೆಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಆರೋಪಿಸಿದರು.

ನಗರದ ವಿವಿಧೆಡೆ ಬುಧವಾರ ಮತಯಾಚಿಸಿ ಮಾತನಾಡಿದ ಅವರು,
ಬೆಲೆ ಏರಿಕೆಗೆ ಜನಸಾಮಾನ್ಯರು ತತ್ತರಿಸಿದ್ದಾರೆ. ಸಿಲಿಂಡರ್ ಬಿಟ್ಟು, ಕಟ್ಟಿಗೆ ಹೊಲೆಗಳತ್ತ ಜನ ಗಮನಹರಿಸುತ್ತಿದ್ದಾರೆ. ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ನಿತ್ಯ ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ದೂರಿದರು.

 

 

 

ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರಿಗೆ ಈಗಾಗಲೇ ರಾಜ್ಯದ ಮತದಾದರರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಅದೆ ಮಾದರಿಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಭಗವದ್ಗೀತೆ, ಬೈಬಲ್, ಕುರಾನ್ ಸೇರಿದಂತೆ ಎಲ್ಲ ಧರ್ಮಗ್ರಂಥಗಳ ಕುರಿತು ಗೌರವ ಇದೆ. ಆದರೆ, ಬಿಜೆಪಿ ನಾಯಕರಿಗೆ ಯಾವ ಧರ್ಮಗಳ ಗ್ರಂಥದ ಬಗ್ಗೆ ಗೌರವ ಇಲ್ಲ. ಭಗವದ್ಗೀತೆಗೆ ಕುರಿತು ಕೂಡ ಗೌರವ ಇಲ್ಲ ಎಂಬುದಕ್ಕೆ ಅವರು ನಡೆಸಿರುವ ಭ್ರಷ್ಟಾಚಾರ, ಗಲಭೆ, ಕೋಮುಧ್ವೇಷದ ಭಾಷಣವೇ ಸಾಕ್ಷಿ ಎಂದರು.

ಈಗಾಗಲೇ ಕ್ಷೇತ್ರದಲ್ಲಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕೆಂದು ಎಲ್ಲ ಸಮುದಾಯದವರು ಸ್ವಯಂ ಆಗಿ ಸಂಘಟನೆಯಲ್ಲಿ ತೊಡಗಿದ್ದಾರೆ.
ಬಸವಣ್ಣನ ಆಶಯದಡಿ ರಚನೆಗೊಂಡಿರುವ ಸಂವಿಧಾನವನ್ನೇ ಬದಲು ಮಾಡಲು ಮುಂದಾಗಿರುವ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ನೋಟ್ ಬ್ಯಾನ್, ಜಿ.ಎಸ್.ಟಿ., ಬೆಲೆ ಏರಿಕೆ ಕಾರಣಕ್ಕೆ ಈಗಾಗಲೇ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಬರುವ ದಿನಗಳಲ್ಲಿ ನೆಮ್ಮದಿ ಜೀವನಕ್ಕೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಜನರೇ ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಮಾಜಿ ಸಚಿವ ಹೆಚ್. ಅಂಜನೇಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಲಿಂಗವ್ವನಾಗತಿಹಳ್ಳಿ ತೀಪ್ಪೇಸ್ವಾಮಿ ಬಸವರಾಜಯ್ಯ ವಿಜಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *