ಜಿಲ್ಲೆಯ ನಾಲ್ವರಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು ಉಪಾಧ್ಯಕ್ಷರು ಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಕೋಟೆ ನಾಡು ಚಿತ್ರದುರ್ಗದ ನಾಲ್ವರಿಗೆ ಅದೃಷ್ಟ ಖುಲಾಯಿಸಿದೆ.
ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ಡಾ. ಬಿ ಯೋಗೇಶ್ ಬಾಬು 2018 ರಲ್ಲಿ ಶ್ರೀರಾಮುಲು ವಿರುದ್ಧ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಇವರನ್ನು ಕರ್ನಾಟಕ ದ್ರಾಕ್ಷಾ ಸರ ಮಂಡಳಿಯ ಅಧ್ಯಕ್ಷರನ್ನಾಗಿ, ಹಾಗೂ ಹೊಳಲ್ಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಚಿಯಾಗಿದ್ದ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸವಿತಾ ರಘು, ಅವರನ್ನು ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷರನ್ನಾಗಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಎಂ ಕೆ ತಾಜ್ ಪೀರ್ ಅವರನ್ನು ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಹಾಗೂ ಜಿಎಸ್ ಮಂಜುನಾಥ್ ಅವರನ್ನು ಕಾರ್ಮಿಕ ಕಲ್ಯಾಣ ಮಂಡಳಿಯ ಉಪಾಧ್ಯಕ್ಷರನ್ನಾಗಿ ಎರಡು ವರ್ಷಗಳ ಕಾಲ ಆಡಳಿತ ನೆಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.