ನಾಳೆ ಧರಣಿ ನಿರತ ರೈತರ ಜೊತೆ ಚರ್ಚಿಸಲಿರುವ ಕೇಂದ್ರ ಸಚಿವರು

ಜಿಲ್ಲಾ ಸುದ್ದಿ

ಚಿತ್ರದುರ್ಗದ ಸದಾನಂದಯ್ಯ ಬಡಾವಾಣೆಯ 6 ನೇ ವಾರ್ಡಿನಲ್ಲಿ ಮೋದಿ‌ ಮೊಗದೊಮ್ಮೆ ಎಂಬ ಗೋಡೆ ಬರಹಕ್ಕೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಚಾಲನೆ ನೀಡಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 10 ಗಂಟೆಗೆ ಚಿತ್ರದುರ್ಗ ರೈಲ್ವೆ ನಿಲ್ದಾಣದಲ್ಲಿ ಅಯೋಧ್ಯಾ ಧಾಮಕ್ಕೆ ಹೊರಡುವ ವಿಶೇಷ ರೈಲಿಗೆ ಚಾಲನೆ ನೀಡುವರು,ನಂತರ ಗಂಗಾ ಪರಮೇಶ್ವರಿ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಾಗೂ ಸಮುದಾಯಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಜಿಲ್ಲಾ ಪಂಚಾಯಿತಿ ಕಚೇರಿ‌ ಆವರಣದಲ್ಲಿ ಅಪ್ಪರ್ ಭದ್ರಾ ಯೋಜನೆಗೆ 5300 ಕೋಟಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ರೈತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಸಚಿವರ ಆಪ್ತ ಸಹಾಯಕರು ತಿಳಿಸಿದ್ದಾರೆ.

 

 

 

Leave a Reply

Your email address will not be published. Required fields are marked *