Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಒಳ್ಳೆಯ ಕೆಲಸಗಳಿಗೆ ಅಡ್ಡಿಪಡಿಸುವ ಜನರಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ – ಬಿ.ವೈ.ವಿಜಯೇಂದ್ರ
ಆರೋಗ್ಯ

ಒಳ್ಳೆಯ ಕೆಲಸಗಳಿಗೆ ಅಡ್ಡಿಪಡಿಸುವ ಜನರಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ – ಬಿ.ವೈ.ವಿಜಯೇಂದ್ರ

D KumaraswamyBy D KumaraswamySeptember 23, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಒಳ್ಳೆಯ ಕೆಲಸಗಳಿಗೆ ಅಡ್ಡಿಪಡಿಸುವ ಜನರಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ – ಬಿ.ವೈ.ವಿಜಯೇಂದ್ರ

 

 

ಸಿರಿಗೆರೆ : ರೈತರು ದೇಶಕ್ಕೆ ಅನ್ನ ನೀಡುವವರು. ದೇಶಕ್ಕೆ ರೈತರಿಂದ ಸಮಸ್ಯೆ ಇಲ್ಲ. ರೈತರು ಪ್ರಕೃತಿಗೆ ಅನ್ಯಾಯ ಮಾಡುವುದಿಲ್ಲ. ಸರ್ಕಾರ ನೌಕರರಿಗೆ ಪ್ರತಿವರ್ಷ ವೇತನ ಹೆಚ್ಚಿಸುತ್ತದೆ. ಆದರೆ ರೈತರಿಗೆ ಬೆಳೆಗಳ ಬೆಲೆ ಹೆಚ್ಚಿಸುವುದು ಅಗತ್ಯವಾಗಿದೆ. ಪ್ರಾಣಿಗಳು ನಿರುಪದ್ರವಿಗಳು. ಅವುಗಳಿಗೆ ಯಾವ ಧರ್ಮ ಗುರುಗಳು ಉಪದೇಶ ಮಾಡಿರುವುದಿಲ್ಲ. ಎಂದು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಹೇಳಿದರು.
ಸಿರಿಗೆರೆಯಲ್ಲಿ ನಡೆಯುತ್ತಿರುವ ಲಿಂ.ಶಿವಕುಮಾರ ಶ್ರೀಗಳ ೩೨ನೇ ಶ್ರದ್ಧಾಜಂಲಿ ಸಮಾರಂಭದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು
ಹಿರಿಯ ಗುರುಗಳು ವಚನ ಸಾಹಿತ್ಯವನ್ನು ವ್ಯಾಪಕವಾಗಿ ಹೊರತಂದವರು. ವಚನ ಸಾಹಿತ್ಯವನ್ನು ವಿವಿಧ ಭಾಷೆಗಳಲ್ಲಿ ಸರಳವಾಗಿ ದೇಶದ್ಯಾಂತ ಪಸರಿಸಬೇಕೆಂಬ ಹಂಬಲ ಇಟ್ಟುಕೊಂಡವರು. ಕಾಲದ ಕರಾಳ ಗರ್ಭದಲ್ಲಿ ಮುಳುಗಿದ್ದ ವಚನ ಸಾಹಿತ್ಯವನ್ನು ಫ.ಗು.ಹಳಕಟ್ಟಿಯವರು ಸಂಶೋಧಿಸಿ ಪ್ರಕಟಿಸಿದರು ಜೊತೆಗೆ ವಚನ ಸಾಹಿತ್ಯವನ್ನು ವ್ಯಾಪಕ ಪ್ರಚಾರ ಮಾಡಿದರು. ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಎಂದೂ ಮರೆಯಲಾಗದ ಕೆಲಸ ಮಾಡಿದ್ದಾರೆ. ಅದನ್ನು ನಮ್ಮ ಬದುಕಿನಲ್ಲಿ ಅಳವಡಿಕೆ ಮಾಡಿಕೊಳ್ಳಬೇಕು ಎಂದರು.
ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ ಇಂದು ರಾಜಕೀಯವಾಗಿ, ಧಾರ್ಮಿಕವಾಗಿ, ಸಾಮಾಜಿಕವಾಗಿ ಸಮಸ್ಯೆಗಳು ಉಲ್ಭಣವಾಗುತ್ತಿವೆ. ಯಾರು ಒಳ್ಳೆಯ ಕೆಲಸಗಳನ್ನು ಮಾಡಲು ತುಡಿಯುತ್ತಾರೋ ಅವರಿಗೆ ಅಡ್ಡಿಪಡಿಸುವ ಜನರು ಇಂದು ಹೆಚ್ಚಾಗಿದ್ದಾರೆ. ಇಂತವರಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ. ಒಂದು ದೇಶ ಒಂದು ಚುನಾವಣೆಗೆ ಸಂಬಂಧಿಸಿದಂತೆ ಶ್ರೀಗಳು ತಮ್ಮ ಅಂಕಣದಲ್ಲಿ ಸಮ್ಮತಿಸಿದ್ದಾರೆ. ಸಿರಿಗೆರೆ ಮಠ ಒಂದು ತಪೋವನ. ಹಸಿದವರ ಪಾಲಿಗೆ ದಾಸೋಹದ ಮಹಿಮೆ ತಿಳಿಸಿ ಲಕ್ಷಾಂತರ ಮಕ್ಕಳಿಗೆ ಜ್ಞಾನದ ಬೆಳಕನ್ನು ಬೆಳಗಿಸಿದವರು ಶಿವಕುಮಾರ ಶ್ರೀಗಳು. ದೇಶದ ಭವಿಷ್ಯ ಅಡಗಿರುವುದು ಯುವ ಸಮುದಾಯದ ಮೇಲೆ. ಯುವಕರು ಸ್ವಾರ್ಥಿಗಳಾಗದೆ ತಂದೆ-ತಾಯಿಗಳಿಗೆ ಬೆಲೆ ನೀಡಿ ಸಾಧನೆಯ ಕಡೆಗೆ ಮುಖ ಮಾಡಿ ಎಂದು ಕರೆ ನೀಡಿದರು.
ಅಂತರಾಷ್ಟ್ರೀಯ ಕೃಷಿ ವಿಜ್ಞಾನಿ ಡಾ. ಎಸ್.ಎಲ್.ಕೃಷ್ಣಮೂರ್ತಿ ಮಾತನಾಡಿ, ರೈತರಿಗೋಸ್ಕರ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ೧೬ ಭತ್ತದ ತಳಿಗಳನ್ನು ರೂಪಿಸಿದ್ದೇವೆ. ರೈತರು ಆಧುನಿಕ ಬೇಸಾಯ ಪದ್ಧತಿ ಬೆಳೆಸಿ ಹೆಚ್ಚು ಆದಾಯ ಬರುವ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು. ಮೊದಲು ೧೦೦ ಅಡಿಯ ಒಳಗೆ ಭೂಮಿಯಲ್ಲಿ ನೀರು ಸಿಗುತ್ತಿತ್ತು. ಆದರೆ ಮುಂದಿನ ದಿನಗಳಲ್ಲಿ ೧೦೦೦ ಅಡಿ ದಾಟಿದರೂ ನೀರು ಸಿಗದ ಸ್ಥಿತಿ ನಿರ್ಮಾಣವಾಗುತ್ತದೆ. ಹಾಗಾಗಿ ರೈತರು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ಬೆಳೆಯುವ ತಳಿಗಳನ್ನು ಬಳಸಬೇಕಿದೆ. ತರಳಬಾಳು ಕೆ.ವಿ.ಕೆ ಸಂಸ್ಥೆಯಿAದ ಸಹ ಅನೇಕ ತಳಿಗಳು ಜಾರಿಯಲ್ಲಿವೆ.
ಹೊನ್ನಾಳಿ ಶಾಸಕ ಡಿ.ಜೆ.ಶಾಂತನಗೌಡ ಮಾತನಾಡಿ, ವಿಶ್ವದ ಭೂಪಟದಲ್ಲಿ ತಮ್ಮ ಕ್ರಾಂತಿಕಾರಿ ಆಡಳಿತದ ಮೂಲಕ ಸಿರಿಗೆರೆಯ ಮಠದ ಹೆಸರನ್ನು ಉತ್ತುಂಗಕ್ಕೆ ಏರುವಂತೆ ಮಾಡಿದವರು ಶಿವಕುಮಾರ ಶ್ರೀಗಳು. ಸಿರಿಗೆರೆ ಮಠಕ್ಕೆ ಮುಂದಿನ ಉತ್ತರಾಧಿಕಾರಿಯಾಗಿ ಉತ್ತಮ ವ್ಯಕ್ತಿ ಬರಲಿದ್ದಾರೆ. ಮಠದ ವಿರುದ್ಧ ಭೂಟಾಟಿಕೆ ಮಾಡದೇ ಮಠದ ಉನ್ನತಿಗೆ ಎಲ್ಲರೂ ಸಹಕರಿಸಿ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleರಾಜ್ಯ ಸರಕಾರ ಬಿದ್ದರೂ ಅಚ್ಚರಿ ಇಲ್ಲ: ವಿಜಯೇಂದ್ರ
Next Article ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಸಾಮಾನ್ಯ ಪ್ರವೇಶ ಪರೀಕ್ಷೆ: ಸೆ.29ರಂದು ಕಡ್ಡಾಯ ಭಾಷಾ ಪರೀಕ್ಷೆ
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.