Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಇದೇ ಹತ್ತೊಂಬತ್ತರೊಂದು ಬಿಜೆಪಿ ಅಭ್ಯರ್ಥಿ ಚಂದ್ರಪ್ಪ ನಾಮಪತ್ರ ಸಲ್ಲಿಕೆ
ಜಿಲ್ಲಾ ಸುದ್ದಿ

ಇದೇ ಹತ್ತೊಂಬತ್ತರೊಂದು ಬಿಜೆಪಿ ಅಭ್ಯರ್ಥಿ ಚಂದ್ರಪ್ಪ ನಾಮಪತ್ರ ಸಲ್ಲಿಕೆ

D KumaraswamyBy D KumaraswamyApril 11, 2023Updated:April 11, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹೊಳಲ್ಕೆರೆ : ಇದೇ ತಿಂಗಳ ಹತ್ತೊಂಬತ್ತರಂದು ನಾಮಪತ್ರ ಸಲ್ಲಿಸುತ್ತೇನೆ. ದೊಡ್ಡ ಸಂಖ್ಯೆಯಲ್ಲಿ ನೀವುಗಳೆಲ್ಲಾ ಬಂದು ನನ್ನನ್ನು ಆರ್ಶೀವದಿಸಿ ಎಂದು ಹೊಳಲ್ಕೆರೆ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಎಂ.ಚಂದ್ರಪ್ಪ ಜನತೆಯಲ್ಲಿ ಮನವಿ ಮಾಡಿದರು.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಭರಮಸಾಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸೋಮವಾರ ಮತಯಾಚನೆ ಮಾಡಿ ಮಾತನಾಡಿದ ಎಂ.ಚಂದ್ರಪ್ಪ ತುಂಗಭದ್ರಾ, ಹಿರಿಯೂರಿನ ವಾಣಿವಿಲಾಸ ಸಾಗರದಿಂದ ನೀರು ತಂದು ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಹೊಸಹಳ್ಳಿ, ಕೋಗುಂಡೆ, ಭರಮಸಾಗರ, ಬಹದ್ದೂರ್‍ಘಟ್ಟದಲ್ಲಿ ನ್ಯಾಷನಲ್ ಹೈವೆ ಮಾದರಿಯಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. 496 ಹಳ್ಳಿಗಳಲ್ಲಿ ಸಿ.ಸಿ.ರಸ್ತೆ, ಟಾರ್ ರಸ್ತೆ ನಿರ್ಮಿಸಲಾಗಿದೆ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 600 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿಕೊಂಡು ತಾಲ್ಲೂಕಿನ ಎಲ್ಲಾ ಕೆರೆ ಕಟ್ಟೆಗಳಿಗೆ ನೀರು ತುಂಬಿಸಿದ್ದರಿಂದ ಎಲ್ಲಾ ಕಡೆ ಐವತ್ತು ಅರವತ್ತು ಅಡಿ ಬೋರ್ ಕೊರೆಸಿದರೆ ಸಾಕು ನೀರು ಸಿಗುತ್ತದೆ. ಅಷ್ಟರ ಮಟ್ಟಿಗೆ ಅಂರ್ತಜಲ ವೃದ್ದಿಯಾಗಿದೆ ಎಂದು ಹೇಳಿದರು.
ನಾಲ್ಕು ಸಾವಿರ ಕೋಟಿ ರೂ.ಗಳ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಹಗಲು-ರಾತ್ರಿ ಶ್ರಮಿಸಿದ್ದೇನೆ. ಇಲ್ಲಿಂದ ಗೆದ್ದು ಹೋಗಿ ಮಂತ್ರಿಯಾಗಿದ್ದವರು ಏನು ಮಾಡಿದರು ಎನ್ನುವುದನ್ನು ನೀವುಗಳು ಕೇಳಲೇಬೇಕು. ಅವರೆ ಗ್ಯಾರೆಂಟಿ ಇಲ್ಲದಿರುವಾಗ ಗ್ಯಾರೆಂಟಿ ಕಾರ್ಡ್‍ಗಳನ್ನು ಏಕೆ ಕೊಡಬೇಕು. ಗ್ಲಾಸ್ ಹಾಕಿಸಿ ಮನೆಯಲ್ಲಿ ಇಟ್ಟುಕೋ ಎಂದು ಹೇಳಿ ಕಳಿಸಿ ಎಂದು ಮತದಾರರನ್ನು ಜಾಗೃತಗೊಳಿಸಿದರು.
ಹಾಲಿದ್ದಾಗ ಹಬ್ಬ ಮಾಡು ಅಧಿಕಾರವಿದ್ದಾಗ ಕೆಲಸ ಮಾಡು ಎನ್ನುವ ಚಿಂತನೆಯಿಟ್ಟುಕೊಂಡು ಕ್ಷೇತ್ರದ ಜನರ ಹಿತಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವ ರಾಜಕಾರಣಿ ನಾನು. 493 ಹಳ್ಳಿಗಳಲ್ಲಿ ಇಂತಹ ಕೆಲಸ ಮಾಡಿಲ್ಲ ಅನ್ನಂಗಿಲ್ಲ. ಎಪ್ಪತ್ತೈದು ವರ್ಷಗಳಿಂದ ಅನೇಕರು ಶಾಸಕರುಗಳಾಗಿದ್ದಾರೆ. ಯಾರು ಏನು ಕೆಲಸ ಮಾಡಿದ್ದಾರೆಂದು ನಾನು ಕೇಳಲ್ಲ. ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಮೋದಿರವರು ಮೂರು ವರ್ಷಗಳ ಕಾಲ 130 ಕೋಟಿ ಜನರಿಗೆ ಉಚಿತ ಪಡಿತರ ಕೊಟ್ಟಿದ್ದಾರೆ. ಮುಂದುವರೆದ ದೇಶಗಳಲ್ಲಿ ಇನ್ನು ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಒಳ್ಳೊಳ್ಳೆ ವಿಜ್ಞಾನಿ ಹಾಗೂ ವೈದ್ಯರುಗಳನ್ನು ಕರೆಸಿಕೊಂಡು ಲಸಿಕೆ ಕಂಡುಹಿಡಿದು ಪ್ರತಿಯೊಬ್ಬರಿಗೂ ಮೂರು ಮೂರು ಸಾರಿ ಲಸಿಕೆ ನೀಡಿದ್ದರಿಂದ ಭಾರತದಲ್ಲಿ ಎಲ್ಲರೂ ಸುರಕ್ಷಿತವಾಗಿದ್ದಾರೆ. ಇಂತಹ ಪ್ರಧಾನಿಯನ್ನು ಪಡೆದಿರುವ ನಾವುಗಳು ಪುಣ್ಯವಂತರು. ಹಾಗಾಗಿ ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಿ ನಿಮ್ಮ ಸೇವೆ ಮಾಡಲು ವಿಧಾನಸೌಧಕ್ಕೆ ಕಳಿಸಿಕೊಡಿ ಎಂದು ಮತದಾರರಲ್ಲಿ ವಿನಂತಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ವಿ.ಶರಣಪ್ಪ, ಭರಮಸಾಗರ ಮಂಡಲ ಅಧ್ಯಕ್ಷ ಶೈಲೇಶ್, ಪುರಸಭೆ ಅಧ್ಯಕ್ಷ ಆರ್.ಎ.ಅಶೋಕ್, ಡಿ.ಎಸ್.ಪ್ರವೀಣ್‍ಕುಮಾರ್, ಡಿ.ಎಸ್.ಪ್ರದೀಪ್‍ಕುಮಾರ್, ಮಂಜುನಾಥ್, ಕಲ್ಲೇಶ್, ಮೋಹನ್, ಬಿಜೆಪಿ.ಮುಖಂಡರುಗಳು, ಕಾರ್ಯಕರ್ತರು, ಅಭಿಮಾನಿಗಳು, ಗ್ರಾಮದ ಹಿರಿಯರು ಮತ ಯಾಚನೆಯಲ್ಲಿ ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಕೆರೆ ಹೆಸರಲ್ಲಿ ಕೋಟಿ ಕೋಟಿ ಲೂಟಿ ಶಾಸಕ ಎಂ.ಚಂದ್ರಪ್ಪ ಸಾಧನೆ:ಮಾಜಿ ಸಚಿವ ಎಚ್.ಆಂಜನೇಯ ಆರೋಪ
Next Article ಟಿಕೆಟ್ ಬಗ್ಗೆ ಶಾಸಕ ತಿಪ್ಪಾರೆಡ್ಡಿ ಪ್ರತಿಕ್ರಿಯೆ ಏನು ?
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.