ಕಳ್ಳರ ಬಂಧನ ಲಕ್ಷಾಂತರ ಮೌಲ್ಯದ ಒಡವೆ ಹಾಗೂ ಬೈಕ್ ಗಳು ವಶ

ಕ್ರೈಂ ಜಿಲ್ಲಾ ಸುದ್ದಿ

ಚಿತ್ರದುರ್ಗ: ಮನೆಕಳ್ಳ ಹಾಗೂ ಬೈಕ್ ಗಳು ದೇವಸ್ಥಾನದಲ್ಲಿ ಕಳವು ಮಾಡಿದ್ದ ಒಟ್ಟು ಮೂರು ಜನ ಕಳ್ಳರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಪೋಲಿಸರು ಬಂಧಿಸಿದ್ದಾರೆ.

Chitradurga three people arrest

ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪರಮೇಶ್ವರಪ್ಪ ಎಂಬುವರ ತೋಟದ ಮನೆಯಲ್ಲಿ ಮನೆ ಬೀಗ ಮುರಿದು ಬೀರುವಿನಲ್ಲಿದ್ದ 11 ಲಕ್ಷ ಮೌಲ್ಯದ 310 ಗ್ರಾಂ ಚಿನ್ನದ ಒಡವೆಗಳನ್ನು ಕಳವು ಮಾಡಿದ್ದ ಕಳ್ಳ, ದಾವಣಗೆರೆ ಚನ್ನಗಿರಿ ತಾಲೂಕಿನ ನಾಗರಾಜ್ ನನ್ನು ಹೊಳಲ್ಕೆರೆ
ಪೋಲಿಸರು ಬಂಧಿಸಿದ್ದಾರೆ.

 

 

 

Chitradurga three people arrest

ಬಂಧಿತನು ಕಳವು ಮಾಡಿದ್ದ ಒಡವೆಗಳನ್ನು ಫೈನಾನ್ಸ್ ಗಳಿಗೆ ಮಾರಾಟ ಮಾಡಿದ್ದು, ಫೈನಾನ್ಸ್ ಗಳಿಂದ ಪೋಲಿಸರು ವಶಪಡಿಸಿಕೊಂಡಿದ್ದಾರೆ. ಕಳ್ಳನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಇನ್ನು ಹೊಸದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಗಳ ಕಳ್ಳರಿಬ್ಬರನ್ನು ಬಂಧಿಸಿ ಅವರಿಂದ 6 ಮೌಲ್ಯದ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳರಿಬ್ಬರು ಹೊಸದುರ್ಗ ದೇವಸ್ಥಾನಗಳಲ್ಲಿ ಕೂಡ ಕಳವು ಮಾಡಿದ್ದಾರೆ. ಅಷ್ಟೆ ಅಲ್ಲದೆ ಬಾರ್ ಅಂಡ್ ರೆಸ್ಟೋರೆಂಟ್ ಕಳವಿಗೆ ಯತ್ನಿಸಿದ್ದರು. ಈ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಎಂದು ಪ್ರತ್ಯೇಕ ಪ್ರಕರಣಗಳ ಮಾಹಿತಿಯನ್ನು ಎಸ್ಪಿ ರಾಧಿಕಾ ನೀಡಿದರು.

ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

Leave a Reply

Your email address will not be published. Required fields are marked *