ಪ್ರತ್ಯೇಕ ಅಪಘಾತ, ಮೂವರ ದುರ್ಮರಣ
ಈ ವರ್ಷದ ಕೊನೆಯ ದಿನ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತ್ಯೇಕ ಭೀಕರ ಅಪಘಾತದಲ್ಲಿ ಮೂವರು ಅಸುನೀಗಿದ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ತೋಪುರಮಾಳಿಗೆ ಹಾಗು ಹೊಸ ಕಲ್ಲಹಳ್ಳಿ ಬಳಿ ಆಟೋ ಮತ್ತು ಬುಲೆಟ್ ನಡುವಿನ ಅಪಘಾತದಲ್ಲಿ ಇಬ್ಬರು ಪ್ರಾಣ ಪಕ್ಷಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನ ಬುಲೆಟ್ ನ ಹಿಂದೆ ಕುಳಿತಿದ್ದ ಶಿಲ್ಪ( 30), ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬರ್ಕತ್ ಆಲಿ( 35) ಸ್ಥಳದಲ್ಲೇ ಸಾವೀಗೀಡಾದವರು ಎಂದು ಗುರುತಿಸಲಾಗಿದೆ. ಆಟೋದಲ್ಲಿದ್ದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಬುಲೆಟ್ ಸವಾರನ ಅತಿ ವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಅಪಘಾತ ಚಳ್ಳಕೆರೆ ತಾಲೂಕಿನ ತಳುಕು ಸಮೀಪದ ಗಿರಿಯಮ್ಮನಹಳ್ಳಿ ಬಳಿ ಟಿವಿಎಸ್ ಬೈಕ್ ಮತ್ತು ಬುಲೋರ ನಡುವೆ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಳುಕು ಲಂಬಾಣಿಹಟ್ಟಿ ಗ್ರಾಮದ ರಾಜನಾಯ್ಕ (55) ವರ್ಷ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಸಂಬಂಧಿಕರು ಹಾಗು ಗಿರಿಯಮ್ಮನಹಳ್ಳಿ ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.