ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಇಬ್ಬರು ಸಾವು

ಕ್ರೈಂ

 

 

 

 

Breaking news

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ನಗರದ ತುರುವನೂರು ರಸ್ತೆಯ ರೆಡ್ಡಿ ಸಮುದಾಯ ಭವನದ ಮುಂಭಾಗದಲ್ಲಿ ಘಟನೆ ನಡೆದಿದ್ದು,ಮೃತರನ್ನು ಕೆಳಗೋಟೆಯ ಬಸವರಾಜ್ (64), ಈರಜ್ಜನಹಟ್ಟಿಯ ನರಸಿಂಹಮೂರ್ತಿ(64) ಎಂದು ತಿಳಿದು ಬಂದಿದೆ. ಕಾರಿನ ಚಾಲಕ ಅತೀ ವೇಗ ಮತ್ತು ಅಜಾಗರೂಕತೆಯಿಂದ ನಡೆಸಿದ್ದು, ಅಘಾತಕ್ಕೆ ಕಾರಣ ಎಂದು ತಿಳಿದು ಬಂದಿದ್ದು, ಸಂಚಾರಿ ಪೊಲೀಸ್ ಪಿಎಸ್ ಐ ರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *