ಸಂವಿಧಾನ ಉಳಿಸಲು ಕಾಂಗ್ರೆಸ್ ಗೆ ಮತ ಹಾಕಿ

ರಾಜ್ಯ

ಸಂವಿಧಾನ ಉಳಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಿದೆ ಸಂವಿಧಾನಕ್ಕೆ ಅಪತ್ತು ಬಂದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಅವರು ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ಮಾತಾಡಿದರು. ಪ್ರಜ್ಞಾವಂತ ಮತದಾರರು ಸಂವಿಧಾನ ಉಳಿಸಲು ಕಾಂಗ್ರೆಸ್ ಗೆ ಮತ ಹಾಕುವಂತೆ ಮನವಿ ಮಾಡಿದರು. ಈ‌ ಶೇಕಡ 90 ರಷ್ಟು ಮಹಿಳೆಯರು ಕಾಂಗ್ರೆಸ್ ಪರವಾಗಿದ್ದಾರೆ. ಬಿಜೆಪಿ ಜಾತಿ ಜಾತಿಗಳನ್ನು ಎತ್ತಿ ಕಟ್ಟಿ ಅವೇಶದಲ್ಲಿ ಮಾತಾಡುವ ಮುಖಾಂತರ ಭಾವನೆಗಳನ್ನು ಕೆರಳಿಸಿ ಮತಯಾಚನೆ ಮಾಡುತ್ತಿದ್ದರು. ಇದು ಬಹಳ ವರ್ಷ ನಡೆಯುವುದಿಲ್ಲ.ಇದರಿಂದ ಸಾಲು ಸಾಲಾಗಿ ಮುಖಂಡರು ಬಂದು ಕಾಂಗ್ರೆಸ್ ಪಕ್ಷಕ್ಕೆ ಬಂದು ಸೇರುತ್ತಿದ್ದಾರೆ. ರಾಜ್ಯದ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಕೂಡ ಯಾರೇ ಕಾಂಗ್ರೆಸ್ ಪಕ್ಷಕ್ಕೆ ಬಂದರೂ ಸೇರಿಸಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ ಎಂದರು.

 

 

 

Leave a Reply

Your email address will not be published. Required fields are marked *