ಚಿತ್ರದುರ್ಗ, ನ 01(ಸಂವಾ)- ಕೋವಿಡ್ ವ್ಯಾಕ್ಸಿನ್ ಬಂದಾಗ ಫ್ರಂಟ್ ಲೈನ್ ವಾರಿಯರ್ಸ್ ಗಳಾದ , ವೈದ್ಯರು, ದಾದಿಯರು, ಆಶಾ, ಅಂಗನವಾಡಿ ಕಾರ್ಯಕರ್ತರು, ಪೋಲಿಸರು ಹಾಗೂ ಹಿರಿಯ ನಾಗರೀಕರಿಗೆ ಮೊದಲು ಬಳಕೆ ಮಾಡಿ ನಂತರ ಸಾರ್ವಜನಿಕರಿಗೆ ವ್ಯಾಕ್ಸಿನ್ ಕೊಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಎಸ್ ಓಪಿ ಮಾಡಿದ್ದಾರೆ. ಅದರಂತೆ ಸರ್ಕಾರದಿಂದ ಫ್ರಂಟ್ ಲೈನ್ ವಾರಿಯರ್ಸ್ ಗಳ ಲಿಸ್ಟ್ ನ್ನು ಕಳುಹಿಸಕೊಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ವ್ಯಾಕ್ಸಿನ್ ಬಂದ ಕೂಡಲೇ ಮೊದಲು ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಬಳಕೆ ಮಾಡಿದ ನಂತರ ಸಾರ್ವಜನಿಕರಿಗೂ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಹೇಳಿದರು.
ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ