ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

ರಾಜಕೀಯ ರಾಜ್ಯ

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಟಿಕೇಟ್ ಕೇಳಿದ್ದ ಮಾದಿಗ ಜನಾಂಗದ ಸೂರನಹಳ್ಳಿ ವಿಜಯಣ್ಣ ಬಿಜೆಪಿ. ವರಿಷ್ಟರನ್ನು ಗುರುವಾರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಮುಂದಿನ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸಬೇಕಾದರೆ ಸ್ಥಳೀಯರಿಗೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸೂರನಹಳ್ಳಿ ವಿಜಯಣ್ಣ, ಪ್ರತಿ ಚುನಾವಣೆಯಲ್ಲಿಯೂ ಹೊರಗಿನಿಂದ ಬಂದು ಚಿತ್ರದುರ್ಗ ಪಾರ್ಲಿಮೆಂಟ್ ಕ್ಷೇತ್ರದಿಂದ ಗೆದ್ದುಕೊಂಡು ಹೋಗುತ್ತಿರುವುದು ಸ್ಥಳೀಯರಿಗೆ ಪರಮ ಅನ್ಯಾಯವಾಗುತ್ತಿದೆ. ಕ್ಷೇತ್ರದಲ್ಲಿ ನಾಲ್ಕು ಲಕ್ಷದ ಎಂಬತ್ತು ಸಾವಿರ ಮಾದಿಗ ಜನಾಂಗದವರ ಮತಗಳಿವೆ. ಕಳೆದ ಐದು ವರ್ಷಗಳಿಂದಲೂ ಕ್ಷೇತ್ರಾದ್ಯಂತ ಸುತ್ತಾಡಿ ಜನಾಂಗದ ಪ್ರೀತಿ ವಿಶ್ವಾಸ ಗಳಿಸಿದ್ದೇನೆ. ಹಾಗಾಗಿ ಈ ಬಾರಿಯ ಚುನಾಣೆಯಲ್ಲಿ ಟಿಕೇಟ್ ಯಾರಿಗಾದರೂ ಕೊಡಿ. ಆದರೆ ಸ್ಥಳೀಯರಿಗೆ ಅವಕಾಶ ಕಲ್ಪಿಸಿದಲ್ಲಿ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ದಾರಿ ಸುಗಮವಾಗಲಿದೆ. ಒಂದು ವೇಳೆ ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರನ್ನು ಕರೆ ತಂದು ಚಿತ್ರದುರ್ಗ ಲೋಸಕಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೊಟ್ಟಲ್ಲಿ. ಪಕ್ಷ ಚಿತ್ರದುರ್ಗ ಕ್ಷೇತ್ರವನ್ನು ಕಳೆದುಕೊಳ್ಳುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ಸ್ಥಳೀಯನಾದ ನನಗೆ ಮನ್ನಣೆ ಕೊಡಬೇಕೆಂದು ಸೂರನಹಳ್ಳಿ ವಿಜಯಣ್ಣ ವರಿಷ್ಠರಲ್ಲಿ ವಿನಂತಿಸಿದರು.

 

 

 

 

Leave a Reply

Your email address will not be published. Required fields are marked *