ದಾವಣಗೆರೆ: ಕೋಡಿ ಹಳ್ಳಿ ಮಠದ ಸ್ವಾಮೀಜಿಗಳು ನುಡಿದ ಭವಿಷ್ಯ ನಿಜವಾಗುತ್ತದೆ ಎಂಬಲಾಗುತ್ತದೆ. ಅದೇ ರೀತಿ ಪ್ರಸ್ತುತ ರಾಜಕೀಯದ ಬಗ್ಗೆ ಸ್ವಾಮೀಜಿ ಇಂದು ಕೂಡ ದೇಶ ಹಾಗೂ ರಾಜ್ಯದಲ್ಲಿ ರಾಜಕೀಯ ಜನವರಿ ವೇಳೆಗೆ ವಿಪ್ಲವ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾ ಸ್ಚಾಮೀಗಳು ಪರೋಕ್ಷವಾಗಿ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ.ಎಂದು ಹೇಳಿದ್ದಾರೆ. ಈಗಾಗಲೇ ಅಮೇರಿಕಾ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ.ಇದೇ ರೀತಿ ನಮ್ಮ ರಾಜ್ಯ ರಾಷ್ಟ್ರದಲ್ಲಿ ರಾಜಕೀಯ ವಿಪ್ಲವ ಆಗಲಿದೆ ಬಿಎಸ್ ವೈ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಹೇಳಿದರು
ಸಂಯುಕ್ತವಾಣಿ