ಕಾಂಗ್ರೆಸ್ ಮುಖಂಡರಾದ ಜಿ.ರಘು ಆಚಾರ್ ಅವರ ಪತ್ನಿ ಆಶಾ ರಘು ಆಚಾರ್ ಅವರು ಇಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದರು.
ಚಿತ್ರದುರ್ಗದ ಕವಾಡಿಗರಹಟ್ಟಿ ಭಾಗದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ನಿವಾಸಿಗಳ ಮನೆ ಮನೆ ಬಾಗಿಲಿಗೆ ತೆರಳಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಹಂಚಿ, ಈ ಬಾರಿ ಎಲ್ಲರೂ ತಪ್ಪದೇ ಕಾಂಗ್ರೆಸ್ ಗೆ ಮತ ನೀಡಿ ಎಂದು ಮನವಿ ಮಾಡಿದರು. ಈ ವೇಳೆ ತಮ್ಮ ಸಮಸ್ಯೆಯ ಬಗ್ಗೆ ಅಳಲು ತೋಡಿಕೊಂಡ ಮಹಿಳೆಯರಿಗೆ ಧೈರ್ಯ ತುಂಬಿ, ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬರುತ್ತದೆ. ನಾವೆಲ್ಲಾ ನಿಮ್ಮ ಜೊತೆಗಿದ್ದೇವೆ, ನಿಮ್ಮ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ನಾವು ಪರಿಹರಿಸುತ್ತೇವೆ ಎಂದು ಭರವಸೆ ನೀಡಿದರು.
ಪ್ರಚಾರದ ಸಂದರ್ಭದಲ್ಲಿ ಜಯಣ್ಣ ಅವರ ಪುತ್ರ ದಲಿತ ಮುಖಂಡ ಪ್ರಸನ್ನ ಕುಮಾರ್, ವಿಶ್ವಕರ್ಮ ಮುಖಂಡರಾದ ಆರ್.ಪ್ರಸನ್ನ ಕುಮಾರ್, ಎಂ. ಸರಸ್ವತಮ್ಮ, ಎಸ್.ರಾಜೇಶ್ವರಿ, ಕೆಆರ್ ಪುನೀತ್ ಸಿಂಗಾಪುರ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು..