ಕೋಟೆ ನಾಡಿನಲ್ಲಿ ಹಾವು ಕಚ್ಚಿ ಮಹಿಳೆ ಸಾವು

ಜಿಲ್ಲಾ ಸುದ್ದಿ

ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಮೀಪದ ಚಿತ್ರದುರ್ಗ ತಾಲೂಕಿನ ಭರಮಸಾಗರದ ಓಬಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತರನ್ನು ಗಿರಿಜಮ್ಮ (65) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿರುವ ಅವರ ಮನೆ ಬಳಿ
ಕೃಷಿ ಕೆಲಸದಲ್ಲಿ ನಿರತವಾಗಿದ್ದ ವೇಳೆ ವಿಷಕಾರಿ ಹಾವು ಕಚ್ಚಿದೆ. ತಕ್ಷಣ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

 

Leave a Reply

Your email address will not be published. Required fields are marked *